Webdunia: Portal - Search - Mail - Greetings   More >>
Search  
Welcome, Guest  [ Register | Sign In ]
1 2 3 4 5 6 ...
ಬ್ಲಾಗ್ಸ್
ಅನುವಾದ ಸಾಹಿತ್ಯದಲ್ಲಿ ಓದುವ ಅಸಕ್ತಿ ಹುಟ್ಟಬೇಕು ಎಂದರೆ ಅದು ಎಲ್ಲೊ ನಮ್ಮ ಪಕ್ಕವೇ ನಡೆದ ಘಟನೆಯಂತಿರಬೇಕು. ಆಗಾಗ ಓದುಗನ ಮನಸ್ಸು ತನ್ನ ಸುತ್ತಲಿನ ಪರಿಸರವನ್ನು ಕಲ್ಪಿಸಿಕೊಂಡು ಅಕ್ಷರಗಳ ಲೋಕದಲ್ಲಿ ತನ್ಮಯನಾಗಲು ಪ್ರಯತ್ನಿಸುತ್ತದೆ. ಎಲ್ಲೊ ಕಾಣದ ಊರು ಕೇಳದ ಹೆಸರುಗಳಿಂದ
ಟ್ಯಾಗ್‌ಗಳು:

ಇಶಾನ್ ಮಾಡುವ ಆ ಬೋಟ್ ಇದೆಯಲ್ಲ ಅದೊಂದೇ ಸಾಕು ಅವನ Divergent Thinking Style ಸಾಬೀತು ಪಡಿಸಲು. ಇದೇ ರೀತಿ ನಮ್ಮಲ್ಲೂ ಇರಬಹುದಲ್ಲಾ ಇಲ್ಲ ಮುಂದೆ ಹುಟ್ಟುವ ನಮ್ಮ ಮಕ್ಕಳಲ್ಲೂ ಇರಬಹುದಲ್ಲಾ ? ಅದನ್ನ ನೀವು ಹ್ಯಾಗೆ

ಯಾವುದೇ ಕೆಲಸ ಕಷ್ಟ ಅಲ್ಲ, ಗೊತ್ತಿದೆಯಾ? ಒಪ್ಪಿಸಿದ ಕೆಲಸದ ಬಗೆಗಿನ ಮನೋಭಾವ ಬದಲಾಗಬೇಕಷ್ಟೆ...ಉದಾಹರ...

ಹೌದಲ್ವಾ? ನನ್ನ ಅಕ್ಕ ಪಕ್ಕದ ಮನೆಯಲ್ಲಿ ನನ್ನ ವಯಸ್ಸಿನ ಹುಡುಗ್ರು ಯುಗಾದಿಯಂದು, ವಿಷು ಕಣಿ ನೋಡಿ ಹೊಸ ಬಟ್ಟೆ ತೊಟ್ಟು ನಲಿದಾಡುವುದಕ್ಕೆ, ಅವರ ಫ್ರೆಂಡ್ಸಿಗೆಲ್ಲಾ ತೋರಿಸೋದಿಕ್ಕೆ ಎಷ್ಟೊಂದು ಸಂಭ್ರಮದಲ್ಲಿದ್ದಾರೆ! ಸಡಗರ, ಪುಳಕ, ಮನಸ್ಸಿನ ತುಂಬಾ ಹೊಸ ಅಂಗಿ ಚಡ್ಡಿಯ ಕನಸು... ಯುಗಾದಿಗೆ ಒಂದು ವಾರ ಇರುವಾಗಲೇ ಅವರ ಕಣ್ಣುಗಳಲ್ಲದೇನು ಹೊಳಪು! ನಾನು ಯೋಚಿಸಿಕೊಳ್ಳುತ್ತೇನೆ... ಈ ಹಬ್ಬ ಅಂದ್ರೇನು? ಬೆಂದ ಅನ್ನಕ್ಕೇ ಒಂದಷ್ಟು ಬೆಲ್ಲ ಹಾಕಿ, ತೆಂಗಿನ ಕಾಯಿ ಇದ್ದರೆ ಅದನ್ನು ಅರೆದು ಹಾಲು ತೆಗೆದು, ಅದನ್ನೂ ಸೇರಿಸಿದರೆ ಒಂದು ಮಧ್ಯಾಹ್ನದೂಟಕ್ಕೆ ಅರ್ಧ ಲೋಟದಲ್ಲಿ ಪಾಯಸ ಎಂಬ ಸಿಹಿ ಪದಾರ್ಥ ತಿಂದರೆ ಅದೇ ಹಬ್ಬವಾಗಿಬಿಡುತ್ತಿತ್ತು ನನಗೆ. ಹೊಸ ಅಂಗಿ-ಚಡ್ಡಿಯ ಬಗ್ಗೆ ನಾನಂತೂ ಕನಸು ಕಂಡದ್ದಿಲ್ಲ, ಕಾಣುವಂತೆಯೂ ಇರಲಿಲ್ಲ.
ವರ್ಗಗಳು: ಕನ್ನಡ ದೇಶ
ಟ್ಯಾಗ್‌ಗಳು:

ಕತ್ತೆ=ಕುದುರೆ=ಸಮಾನತೆ ಶೀರ್ಷಿಕೆ ತಮಾಷೆಯಾಗಿದೆಯಲ್ವಾ? ವಾಸ್ತವ ಅದಕ್ಕಿಂತ ಹೆಚ್ಚು ತಮಾಷೆಯಾಗಿರುತ್ತದೆ. ಅಷ್ಟೇ ಅಲ್ಲ, ಅನೇಕ ಸಾರಿ ದುರಂತವೂ ಆಗಿರುತ್ತದೆ. ಒಂದು ಕತೆ ಕೇಳಿ. ಕಂಪನಿಯೊಂದರಲ್ಲಿ ಹಲವಾರು ಮಹತ್ವದ ಹುದ್ದೆಗಳು ಖಾಲಿ ಇದ್ದವು. ಸುದ್ದಿ ತಿಳಿಯುತ್ತಲೇ ಕುದುರೆಗಳು ಅರ್ಜಿ ಹಾಕಿದವು. ಸ್ವಲ್ಪ ದಿನಗಳ ನಂತರ ಸಂದರ್ಶನಕ್ಕೆ ಕರೆ ಬಂದಿತು. ಅಲ್ಲಿ ನೋಡಿದರೆ, ಕತ್ತೆಗಳು ಕೂಡ ಸಂದರ್ಶನಕ್ಕೆ ಬಂದಿವೆ! ಆಘಾತಗೊಂಡ ಕುದುರೆಗಳು ಪ್ರಶ್ನಿಸಿದವು, ’ಈ ಹುದ್ದೆಗಳನ್ನು ಕುದುರೆಗಳು ಮಾತ್ರ ನಿಭಾಯಿಸಬಲ್ಲವು. ಅದ್ಹೇಗೆ ನೀವು ಸಂದರ್ಶನಕ್ಕೆ ಬಂದಿದ್ದೀರಿ?’ ಕತ್ತೆಗಳು ಹೆಮ್ಮೆಯಿಂದಲೇ ಇಂಟರ್‌ವ್ಯೂ ಕಾರ್ಡ್‌ ತೋರಿಸಿದವು. ಅನುಮಾನವೇ ಇಲ್ಲ, ಕತ್ತೆಗಳನ್ನು ಅಧಿಕೃತವಾಗಿಯೇ ಸಂದರ್ಶನಕ್ಕೆ ಕರೆಯಲಾಗಿತ್ತು. ಸ್ವಲ್ಪ ಹೊತ್ತಿನ ನಂತರ ಸಂದರ್ಶನ ಪ್ರಾರಂಭವಾಯಿತು. ಒಂದು ಕತ್ತೆಯ ನಂತರ ಒಂದು ಕುದುರೆಯನ್ನು ಕರೆಯಲಾಗುತ್ತಿತ್ತು. ಕತ್ತೆಗಳ ಜೊತೆ ಗುರುತಿಸಿಕೊಳ್ಳಬೇಕಲ್ಲ ಎಂಬ ಮುಜುಗರದಿಂದಲೇ ಕುದುರೆಗಳು ಸಂದರ್ಶನ ಮುಗಿಸಿದವು. ಕತ್ತೆಗಳಿಗೆ ಮಾತ್ರ ಹೆಮ್ಮೆಯೋ ಹೆಮ್ಮೆ. ಸ್ವಲ್ಪ ದಿನಗಳ ನಂತರ ನೇಮಕಾತಿ ಆದೇಶಗಳು ಬಂದವು. ಕುದುರೆಗಳಿಗೆ ಸಂತಸ. ’ಪರವಾಗಿಲ್ಲ, ಕತ್ತೆಗಳೊಂದಿಗೆ ಸಂದರ್ಶನ ನೀಡಬೇಕಾಗಿ ಬಂದರೂ ಕೆಲಸ ಸಿಕ್ಕಿತಲ್ಲ’ ಎಂದು ಖುಷಿಯಿಂದಲೇ ಕಚೇರಿಗೆ ಹೋದವು. ಅಲ್ಲಿ ಆಘಾತ ಕಾಯ್ದಿತ್ತು. ಕತ್ತೆಗಳು ಕೂಡ ಕೆಲಸಕ್ಕೆ ಹಾಜರಾಗಲು ಬಂದಿವೆ! ಅವಕ್ಕೂ ಅಪಾಯಿಂಟ್‌ಮೆಂಟ್‌ ಆರ್ಡರ್‌ ಸಿಕ್ಕಿದ್ದವು! ಕುದುರೆಗಳಿಗೆ ಮತ್ತೆ ಮುಜುಗರ ಪ್ರಾರಂಭವಾಯಿತು. ಬಾಸ್‌ನನ್ನು ಕಂಡು ತಮ್ಮ ಭಾವನೆಗಳನ್ನು ವಿವರಿಸಿದವು: ’ಸರ್‌, ನಾವು ಕುದುರೆಗಳು. ನಾವು ಉತ್ತಮರು ಎಂಬ ಭಾವನೆಗಲ್ಲ, ನಮ್ಮ ಸಾಮರ್ಥ್ಯ ಮತ್ತು ಪ್ರತಿಭೆಯೇ ಬೇರೆ. ಅದಕ್ಕೆ ತಕ್ಕ ಕೆಲಸ ಕೊಡಿ. ಕತ್ತೆಗಳೊಂದಿಗೆ ನಮ್ಮನ್ನು ಸಮೀಕರಿಸಬೇಡಿ.’ ಆದರೆ ಬಾಸ್‌ ಅವುಗಳ ವಾದ ಒಪ್ಪಲಿಲ್ಲ. ’ಇದು ಸಮಾನತೆಯ ಕಾಲ. ಕುದುರೆಗಳಿಗೆ ದೊರೆಯುವ ಎಲ್ಲ ಅವಕಾಶಗಳು ಕತ್ತೆಗಳಿಗೂ ದೊರೆಯಲಿವೆ. ನೀವು ಅವುಗಳ ಜೊತೆಗೇ ಕೆಲಸ ಮಾಡಬೇಕು. ಯಾರು ಚೆನ್ನಾಗಿ ಕೆಲಸ ಮಾಡುತ್ತಾರೋ ಅವರಿಗೆ ಮನ್ನಣೆ ಖಂಡಿತ ದೊರೆಯುತ್ತದೆ.’ ಕುದುರೆಗಳಿಗೆ ಅಸಮಾಧಾನವಾದರೂ ಅನಿವಾರ್ಯವಾಗಿ ಸುಮ್ಮನಾದವು. ಕೆಲಸ ಪ್ರಾರಂಭವಾಯಿತು. ಕ್ರಮೇಣ ಕತ್ತೆ ಹಾಗೂ ಕುದುರೆಗಳಿಗೆ ಇರುವ ವ್ಯತ್ಯಾಸ ಸ್ಪಷ್ಟವಾಗಿ ಗೊತ್ತಾಗಲು ಶುರುವಾಯಿತು. ಕುದುರೆಗಳು ಚೆನ್ನಾಗಿ ಕೆಲಸ ಮಾಡುತ್ತಿದ್ದವು. ಕಠಿಣ ಕೆಲಸವನ್ನು ಹಗುರವಾಗಿ ಮಾಡಿ ಮುಗಿಸುತ್ತಿದ್ದವು. ಆದರೆ ಕತ್ತೆಗಳಿಗೆ ಅಂಥ ಸೂಕ್ಷ್ಮ ಇರಲಿಲ್ಲ. ದೊಡ್ಡ ಸಾಮರ್ಥ್ಯದ ಕೆಲಸಗಳನ್ನು ಮಾಡಲು ಅವಕ್ಕೆ ಸಾಧ್ಯವಾಗುತ್ತಲೂ ಇರಲಿಲ್ಲ. ಹಾಗಂತ ಕೆಲಸ ಬಿಟ್ಟು ಕೊಡಲೂ ಅವು ತಯಾರಿರಲಿಲ್ಲ. ’ನಾವೂ ನಿಮ್ಮಂತೇ ಸಮಾನರು. ನಮ್ಮಿಬ್ಬರ ಗ್ರೇಡ್‌ ಒಂದೇ. ಸಂಬಳ ಒಂದೇ. ಕೆಲಸ ಒಂದೇ. ಸ್ವಲ್ಪ ಕಡಿಮೆ ಗುಣಮಟ್ಟ ಬಂದರೇನಂತೆ, ಸಹಿಸಿಕೊಳ್ಳಬೇಕಪ್ಪ’ ಎಂದು ವಾದಿಸಿದವು. ಸ್ವಲ್ಪ ದಿನ ಹೀಗೇ ನಡೆಯಿತು. ಕಚೇರಿಗೆ ಬಂದವರು ಕತ್ತೆಗಳ ಜೊತೆ ಕುದುರೆಗಳು ಕೆಲಸ ಮಾಡುತ್ತಿದ್ದುದನ್ನು ಕಂಡು ತಮಾಷೆ ಮಾಡಿದರು. ಎಷ್ಟೋ ಸಾರಿ, ಕತ್ತೆಗಳ ಕಳಪೆ ಕೆಲಸದ ಜವಾಬ್ದಾರಿಯನ್ನು ಕುದುರೆಗಳೂ ಹೊರಬೇಕಾಗಿ ಬಂದಿತು. ಆದರೆ, ’ಸಮಾನತೆ’ ವಾದ ಮುಂದೊಡ್ಡಿ ಅದನ್ನೆಲ್ಲ ಸಮರ್ಥಿಸಲಾಯಿತು. ಇದೆಲ್ಲ ಅತಿರೇಕವಾಯಿತು ಅನ್ನಿಸಿದಾಗ ಕುದುರೆಗಳಲ್ಲಿ ಕೆಲವು ಮತ್ತೆ ಬಾಸ್‌ ಕಂಡು ತಮ್ಮ ಅಳಲು ತೋಡಿಕೊಂಡವು. ಕತ್ತೆಗಳ ಜೊತೆ ಇದ್ದರೆ ನಮ್ಮ ಕೆಲಸದ ಮಹತ್ವ ಗೊತ್ತಾಗುವುದಿಲ್ಲ. ಕೆಲಸವನ್ನು ಕಳಪೆಯಾಗಿ ಹಾಗೂ ಕಡಿಮೆ ಪ್ರಮಾಣದಲ್ಲಿ ಮಾಡಿದರು ಕೂಡ ಅವು ನಮ್ಮೊಂದಿಗೆ ವೇದಿಕೆ ಹಂಚಿಕೊಳ್ಳುತ್ತವೆ. ಅದರ ಬದಲು, ಕತ್ತೆ ಚೆನ್ನಾಗಿ ಮಾಡಬಹುದಾದ ಕೆಲಸವನ್ನು ಕತ್ತೆಗೆ ಕೊಡಿ, ಕುದುರೆಗಳು ಚೆನ್ನಾಗಿ ಮಾಡುವ ಕೆಲಸವನ್ನು ಕುದುರೆಗಳು ಮಾಡಲಿ. ಒಂದೇ ಕಚೇರಿಯಲ್ಲಿದ್ದರೂ ಸರಿ, ಅವರವರ ಸಾಮರ್ಥ್ಯಕ್ಕೆ ತಕ್ಕ ಕೆಲಸವನ್ನು ಹಂಚಿಕೊಡಿ ಎಂದು ವಿನಂತಿಸಿಕೊಂಡವು. ಆದರೆ ಬಾಸ್‌ ಕೇಳಲಿಲ್ಲ. ’ನಮ್ಮ ಪಾಲಿಸಿಯೇ ಹಾಗಿದೆ. ಸಮಾನತೆ ನಮ್ಮ ಮಂತ್ರ. ಕತ್ತೆಗಳು ಮೂಲತಃ ಕುದುರೆಗಿಂತ ಕಡಿಮೆ ದರ್ಜೆಯದು ಎಂದು ನಮಗೆ ಗೊತ್ತಿದೆ. ಅವುಗಳ ಸಾಮರ್ಥ್ಯ ಹೆಚ್ಚಿಸಲು ತುಂಬ ಸಮಯ ಹಾಗೂ ಹಣ ಬೇಕಾಗುತ್ತದೆ. ಅದು ನಮ್ಮಿಂದ ಸಾಧ್ಯವಿಲ್ಲ. ಹಾಗಂತ ಕೇವಲ ಕುದುರೆಗಳನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಲು ಆಗದು. ಆದ್ದರಿಂದಲೇ ಕತ್ತೆ ಮತ್ತು ಕುದುರೆಗಳನ್ನು ಒಟ್ಟೊಟ್ಟಿಗೇ ಕೆಲಸಕ್ಕೆ ತೆಗೆದುಕೊಂಡಿದ್ದೇವೆ’ ಎಂದು ವಿವರಿಸಿದರು. ’ಆದರೆ, ಇದರಿಂದ ಕೆಲಸದ ಗುಣಮಟ್ಟ ಹೇಗೆ ಸಾಧ್ಯವಾಗುತ್ತದೆ ಸರ್‌?’ ಎಂದವು ಕುದುರೆಗಳು. ’ಸಿಂಪಲ್‌. ಕುದುರೆಗಳ ಜೊತೆ ಇರುವುದರಿಂದ ಕತ್ತೆಗಳು ತಮ್ಮ ಕೀಳರಿಮೆ ಕಳೆದುಕೊಂಡು, ತಾವೂ ಕುದುರೆಗಳಿಗೆ ಸರಿ ಸಮ ಎಂದು ಹೆಮ್ಮೆ ಪಡುತ್ತವೆ. ಇನ್ನೊಂದೆಡೆ, ಕತ್ತೆಗಳ ಜೊತೆ ಇರುವುದರಿಂದ ಕುದುರೆಗಳಲ್ಲಿ ಕೀಳರಿಮೆ ಉಂಟಾಗಿ, ಅವು ಕತ್ತೆಗಳ ಮಟ್ಟಕ್ಕೆ ಇಳಿಯುತ್ತವೆ. ಇದರಿಂದ ಇಡೀ ಕಚೇರಿಯಲ್ಲಿ ಒಂದೇ ಮಟ್ಟದ ವರ್ಕ್‌ ಫೋರ್ಸ್‌ ಸೃಷ್ಟಿಯಾಗುತ್ತದೆ. ಹೇಗಿದೆ ಐಡಿಯಾ?’, ಕೇಳಿದರು ಬಾಸ್‌. ನೀತಿ: ಅಂದಿನಿಂದ ಬಹುತೇಕ ಕಚೇರಿಗಳಲ್ಲಿ ಕುದುರೆಗಳ ಜೊತೆ ಜೊತೆ ಕತ್ತೆಗಳೂ ಸಮನಾಗಿ ಕೆಲಸ ಮಾಡುವ ವಾತಾವರಣ ಸೃಷ್ಟಿಯಾಯಿತು. ಸಾಮಾಜಿಕ ನ್ಯಾಯದಂತೆ ಇದೂ ಒಂಥರಾ ಬೌದ್ಧಿಕ ನ್ಯಾಯ. ಅನುಮಾನ ಬಂದರೆ, ನೀವು ಕೆಲಸ ಮಾಡುತ್ತಿರುವ ವಾತಾವರಣವನ್ನು ಸೂಕ್ಷ್ಮವಾಗಿ ಗಮನಿಸಿ ನೋಡಿ. - ಚಾಮರಾಜ ಸವಡಿ (ಪ್ರೇರಣೆ: ಒನ್‌ ನೈಟ್‌ @ ಕಾಲ್‌ ಸೆಂಟರ್‌)

ಮಹಿಳೆಯರ ಮೇಲಿನ ದಬ್ಬಾಳಿಕೆ ಶೋಷಣೆ ಇಂದು ನಿನ್ನೆಯ ಕಥೆಯಲ್ಲ. ಮನೆಯಲ್ಲಾದರೂ, ಕಚೇರಿಯಲ್ಲಾದರೂ ಶೋಷಣೆಗೆ ಒಳಪಡುವವಳು ಮಹಿಳೆಯೇ. ಮಾನಸಿಕವಾಗಿ ಅಥವಾ ಶಾರೀರಿಕವಾಗಿ ಶೋಷಣೆ ನಡೆಸುತ್ತಾ ಬಂದಿರುವ ಪುರುಷ ಪ್ರಧಾನ ಸಮಾಜವು ಶೋಷಣೆಗೊಳಗಾದ ಮಹಿಳೆಯನ್ನು ಯಾವ ರೀತಿ ಸ್ವೀಕರಿಸಿದೆ ಎಂಬುದು ಚಿಂತಿಸಬೇಕಾದ ವಿಷಯ. ಯಾವುದೇ ...

ಮಹಾಸಮರ ಆರಂಭವಾಗೇ ಬಿಟ್ಟಿದೆ. ರಾಜಕಾರಣಿಗಳ ಭಂಡ ರಾಜಕೀಯದಲ್ಲಿ ಬಡವಾಗಿದ್ದ ಕರ್ನಾಟಕದ ಜನತೆ ಮತ್ತೊಂದು ಬಾರಿ ಅದೇ ಭಂಡರನ್ನು ಆಯ್ಕೆ ಮಾಡಲು ತಯಾರಾಗಿದ್ದಾರೆ.ದಿನಕ್ಕ...


ಹಲವಾರು ಬಾರಿ ಹಾಗನ್ನಿಸಿದೆ. ಸತ್ಯ ಏನೆಂಬುದು ಗೊತ್ತಿರುತ್ತದೆ. ಆದರೆ, ಹೇಳಲಾಗುವುದಿಲ್ಲ. ಭಂಡತನದಿಂದ ತನ್ನ ನಿರ್ಣಯವನ್ನು ಜಾರಿಗೊಳಿಸುವ ವ್ಯಕ್ತಿ ತಪ್ಪು ಮಾಡುತ್ತಿದ್ದಾನೆ ಎಂದು ತಿಳಿದಿದ್ದರೂ, ಅದನ್ನು ಹೇಳಲಾಗುವುದಿಲ್ಲ. ಏಕೆ ಹಾಗಾಗುತ್ತದೆ? ನಾನು ಸತ್ಯ ಹೇಳಿದರೆ ನಮ್ಮ ಇದ್ದಬದ್ದ ಸಂಬಂಧ ಅಲ್ಲಿಗೇ ಮುಕ್ತಾಯವಾಗುತ್ತದೆ ಎಂಬುದು ನನಗೆ ಗೊತ್ತು. ಅದು ವೃತ್ತಿಪರ ಆಗಿರಬಹುದು ಅಥವಾ ವೈಯಕ್ತಿಕವಾಗಿರಬಹುದು- ಒಟ್ಟಿನಲ್ಲಿ ನಮ್ಮ ಸಂಬಂಧ ಅಂತ್ಯಗೊಳ್ಳುತ್ತದೆ. ತುಂಬ ಸಾರಿ ನೋಡಿದ್ದೇನೆ: ಸಾಮಾನ್ಯವಾಗಿ ದಡ್ಡರು ಉನ್ನತ ಸ್ಥಾನದಲ್ಲಿ ಕೂತಿರುತ್ತಾರೆ. ಪ್ರತಿಭಾವಂತರನ್ನು ಕಂಡರೆ ಅವರಿಗೆ ಅಸೂಯೆ, ಕೀಳರಿಮೆ. ಅದನ್ನು ಹೋಗಲಾಡಿಸಲು ಗತ್ತು ನಟಿಸುತ್ತಾರೆ. ತಮಗೆ ಎಲ್ಲದೂ ಗೊತ್ತಿದೆ ಎಂಬ ಮುಖವಾಡ ತೊಡುತ್ತಾರೆ. ಅದೇ ಹೊತ್ತಿಗೆ, ತನ್ನ ಹುಳುಕು ಯಾರಿಗಾದರೂ ಗೊತ್ತಾದರೆ ಹೇಗೆ ಎಂಬ ಅಳುಕೂ ಅವರನ್ನು ಕಾಡುತ್ತಿರುತ್ತದೆ. ಹೀಗಾಗಿ, ಕೆಲಸ ಗೊತ್ತಿರುವವರನ್ನು ಕಂಡರೆ ಭಯ. ಅವರನ್ನು ಕಾಡಲು ಶುರು ಮಾಡುತ್ತಾರೆ. ಅವರು ಮಾಡಿದ್ದೆಲ್ಲ ತಪ್ಪು ಎನ್ನುತ್ತಾರೆ. ಬೆಳೆಯಲು ಸಾಧ್ಯವಿರುವ ಬಾಗಿಲುಗಳನ್ನೆಲ್ಲ ಮುಚ್ಚುತ್ತಾರೆ. ತಾವಿಲ್ಲದಾಗ ಬಾಗಿಲು ತೆಗೆದುಕೊಂಡು ಬಂದರೆ? ಎಂಬ ಅಳುಕಿನಿಂದಾಗಿ, ಹೊರಗೇ ಕಾವಲು ನಿಲ್ಲುತ್ತಾರೆ. ಇದು ನಿಜಕ್ಕೂ ದುರ್ಭರ ಪರಿಸ್ಥಿತಿ. ಅವಕಾಶ ನಿರಾಕರಿಸಲ್ಪಟ್ಟ ವ್ಯಕ್ತಿಯೂ ಬೆಳೆಯುವುದಿಲ್ಲ, ಆತನ ಕಾವಲಿಗೆ ನಿಂತವನೂ ಬೆಳೆಯಲಾರ. ಇಂಥ ಪರಿಸ್ಥಿತಿ ಉಂಟಾದಾಗ, ಇಬ್ಬರು ವ್ಯಕ್ತಿಗಳು ಮಾತ್ರವಲ್ಲ, ಸಂಸ್ಥೆ ಕೂಡ ಹಾಳಾಗುತ್ತದೆ. ಆಗ ಏನು ಮಾಡಬೇಕು? ನಾನು, ಮೌನವಾಗಿ ಇದ್ದುಬಿಡುತ್ತೇನೆ. ಗತ್ತು ತೋರಿಸುವವನಿಗೇ ಮೊದಲ ಬ್ಯಾಟಿಂಗ್ ಭಾಗ್ಯ ದಕ್ಕಲಿ. ಅವನದೇ ಮಾತು ನಡೆಯಲಿ. ತನ್ನ ಗತ್ತು ಮತ್ತು ಶಕ್ತಿ ಪ್ರದರ್ಶನದ ಅತಿರೇಕದಲ್ಲಿ ಆತನ ದೌರ್ಬಲ್ಯ ಬಲು ಬೇಗ ಬಯಲಾಗುತ್ತ ಹೋಗುತ್ತದೆ. ಮೌನವಾಗಿದ್ದುಕೊಂಡು ಓದು-ಬರೆಹ ಮುಂದುವರೆಸಿಕೊಂಡು ಹೋಗುತ್ತೇನೆ. ಅದೊಂಥರಾ ವನವಾಸದ ಸುಖ. ಏನೋ ಶಾಂತಿ, ನೆಮ್ಮದಿ ತರುವ ಮೌನ. ಅಧ್ಯಯನದಲ್ಲಿ ಮುಳುಗಿದಂತೆ, ಅತ್ತ ಗತ್ತು ಯಾವತ್ತೋ ಕರಗಿರುತ್ತದೆ. ಹುಳುಕು ಹೊರಬಿದ್ದಿರುತ್ತದೆ. ಒಮ್ಮೊಮ್ಮೆ ವರ್ಷಗಟ್ಟಲೇ ಕಾಯಬೇಕಾಗಬಹುದು. ಅಷ್ಟೊಂದು ಸಮಾಧಾನ/ಅನಿವಾರ್ಯತೆ ನನಗಿದ್ದರೆ ಕಾಯುತ್ತೇನೆ. ಇಲ್ಲದಿದ್ದರೆ, ಎದ್ದು ಹೋಗುತ್ತೇನೆ. ಏಕೆಂದರೆ, ಬದುಕಿನಲ್ಲಿ ಮುಚ್ಚಿದ ಬಾಗಿಲುಗಳಿಗಿಂತ ತೆರೆದ ಬಾಗಿಲುಗಳೇ ಹೆಚ್ಚು. ಅದು ನನ್ನ ನಂಬಿಕೆಯಷ್ಟೇ ಅಲ್ಲ, ಅನುಭವವೂ ಹೌದು. - ಚಾಮರಾಜ ಸವಡಿ
ವರ್ಗಗಳು: ಚಾಮರಾಜ ಸವಡಿ

ಕರ್ನಾಟಕದಲ್ಲೀಗ ಚುನಾವಣೆಯ ಸಮಯ. ರಾಜಕೀಯ ಪಕ್ಷಗಳಂತೂ ಕನ್ನಡ ಮನಸುಗಳ ಗಮನ ಸೆಳೆಯಲು ಹೊಗೇನಕಲ್ ಘಟನೆಯನ್ನು ಅಸ್ತ್ರವಾಗಿಸಿಕೊಳ್ಳುವ ಎಲ್ಲ ಲಕ್ಷಣಗಳೂ ಕಂಡುಬರುತ್ತಿವೆ. ಏನೇ ಆದರೂ ಕರ್ನಾಟಕದ ಹಿತ ಕಾಯಲು ರಾಜಕೀಯ ಪಕ್ಷಗಳಿಗೆ ಇದೊಂದು ಅವಕಾಶ. ಕಪ್ಪು ಕನ್ನಡಕದ ತಮಿಳು ಮುಖ್ಯಮಂತ್ರಿ ಹೇಳಿಕೆಯು ಸಹಜವಾಗಿ ಕನ್ನಡ ಪರ ಸಂಘಟನೆಗಳು ಮತ್ತು ಪಕ್ಷ ಭೇದವಿಲ್ಲದೆ ರಾಜ್ಯದ ರಾಜಕೀಯ ಪಕ್ಷಗಳನ್ನೂ ಬಡಿದೆಬ್ಬಿಸಿವೆ. ಆದರೆ ನಮ್ಮ ಸಂಸದರು ಮಾತ್ರ ಎಚ್ಚೆತ್ತುಕೊಳ್ಳಲು ಸಾಕಷ್ಟು ಕಾಲಾವಕಾಶ ಬೇಕೇನೋ...!
ವರ್ಗಗಳು: ಅದು-ಇದು
ಟ್ಯಾಗ್‌ಗಳು:

महाशिवरात्री माघ वद्य त्रयोदशीला महाशिवरात्री म्हणतात. महाशिवरात्रीचे कात हे काम्य व नैमित्तिक कात आहे.महाशिवरात्री म्हणजे काय ? : पृथ्वीवरील एक वर्ष म्हणजे स्वर्गलोकातील एक दिवस. शिव रात्रीच्या एका प्रहरी विश्रांती घेतो. शिवाच्या विश्रांती घेण्याच्या ...

ಮನೆಯ ಕಾವಲು ನಾಯಿಇರುವಂತೆಸದಾ ನಿನ್ನ ಕಾವಲುನಾ(ಯಿ) ಇಲ್ಲವೇ?


In todays world Education is very very important to all, it plays a very important role in building the nation.
ವರ್ಗಗಳು: education

ಎರಡು ದಿನಗಳ ಹಿಂದೆ ಅಮೆರಿಕದ ಅದ್ಯಕ್ಷ ಬುಷ್ ಭಾರತದಲ್ಲಿ ಆಹಾರ ಧಾನ್ಯಗಳ ಬಳಕೆ ಹೆಚ್ಚಾಗಿರುವ ಕಾರಣ ಜಾಗತಿಕ ಮಟ್ಟದಲ್ಲಿ ಆಹಾರದ ಕೊರತೆ ಇಂದು ಕಾಡುತ್ತಿದೆ ಎಂದು ಇದು ಯಾವ ನ್ಯಾಯ ಸ್ವಾಮಿ.. ಮೊಸರು ತಿಂದ ಮಂಗ ಮೇಕೆ ಬಾಯಿಗೆ ಒರೆಸಿತ್ತಂತೆ.. ಹಂಗಾಯಿತು ಕಥೆ.. ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ವರದಿಯಾಗಿರುವ ಕೆಲ ...

1 2 3 4 5 6 ...